Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಹಿಮಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ – ನೆಲ ಕಚ್ಚಿದ ಹತ್ತಾರು ಮನೆಗಳು

ಹಿಮಾಚಲ ಪ್ರದೇಶ: ಭೀಕರ ಭೂಕುಸಿತ ಸಂಭವಿಸಿ ಹತ್ತಾರು ಮನೆಗಳು ನೆಲಕಚ್ಚಿರುವ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ನಡೆದಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಿದ್ದು, ಭೂಕುಸಿತದಿಂದ ಹಲವು ಮನೆಗಳು ಕುಸಿದಿವೆ.

ಇನ್ನು ಒಂದು ವಾರದ ಹಿಂದೆ ಆಡಳಿತ ಮಂಡಳಿ ಈ ಕಟ್ಟಡಗಳಿಂದ ತೆರವು ಮಾಡಿದ್ದರಿಂದ ಈ ಅವಘಡದ ಸಂದರ್ಭದಲ್ಲಿ ಯಾರೂ ಈ ಕಟ್ಟಡಗಳಲ್ಲಿ ವಾಸಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ.

ಸಿರಾಜ್ ಪ್ರದೇಶದಲ್ಲಿ ಮೇಘಸ್ಫೋಟದಿಂದಾಗಿ ಹಲವು ಮನೆಗಳು ಕೊಚ್ಚಿ ಹೋಗಿದ್ದು, ಜನ ಅಲ್ಲಿಂದ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.