Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಕ್ಷರಧಾಮಕ್ಕೆ ಭೇಟಿ ನೀಡಿದ ಸುನಕ್‌ ದಂಪತಿ

ನವದೆಹಲಿ:ಬ್ರಿಟನ್ ಪ್ರಧಾನಿ ರಿಷಿ ಸುನಕ್‌ ಹಾಗೂ ಪತ್ನಿ ಅಕ್ಷತಾ ಮೂರ್ತಿ ಅವರು ಇಂದು ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಜಿ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಅವರು, ಹೆಮ್ಮೆಯ ಹಿಂದೂ ಎಂದು ಕರೆದುಕೊಂಡಿದ್ದು, ರಾಷ್ಟ್ರ ರಾಜಧಾನಿಯಲ್ಲಿರುವಾಗ ದೇವಾಲಯಕ್ಕೆ ಭೇಟಿ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ದಂಪತಿಯು ದೇವಾಲಯದಲ್ಲಿ ಸುಮಾರು ಒಂದು ತಾಸು ಕಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ

ಅಕ್ಷರಧಾಮಕ್ಕೆ ರಿಷಿ ಸುನಕ್ ಭೇಟಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ದೇವಾಲಯದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸಿದ್ದರು