Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆ

ಬೀದರ್: ಅನೈತಿಕ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತಿಯನ್ನೇ ಪತ್ನಿ ಹಾಗೂ ಪ್ರಿಯಕರ ಸೇರಿ ‌ಕೊಲೆ ಮಾಡಿದ ಪ್ರಕರಣವನ್ನು ಬೀದರ್ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಮಿತ್‌ ಕೊಲೆಯಾಗಿದ್ದು, ಪೊಲೀಸರು ಈಗ ಪತ್ನಿ ಚೈತ್ರಾ, ಆಕೆಯ ಗೆಳೆಯ ರವಿ ಪಾಟೀಲ್ ಅಲ್ಲದೇ ಕೃತ್ಯಕ್ಕೆ ಸಹಕಾರ ನೀಡಿದ ಸಿಕ್ಕಿಂದರ್ ಶಾಹಾ, ವೆಂಕಟ್ ಗಿರಿಮಾತೆ ಮತ್ತು ಆಕಾಶ್ ಅವರನ್ನು ಬಂಧಿಸಿದ್ದಾರೆ.

ಪೊಲೀಸರು ಈಗ ಕೃತ್ಯಕ್ಕೆ ಬಳಸಿದ ರಾಡ್, ಮೊಬೈಲ್‌ ಹಾಗೂ ಕೊಲೆ ಮಾಡಲು ಸಹಚರರಿಗೆ ನೀಡಿದ ಮುಂಗಡ ಹಣವನ್ನು ಜಪ್ತಿ ಮಾಡಿದ್ದಾರೆ.