Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

-ಅಲ್ಲಮಪ್ರಭುದೇವರು  ಅವರ ವಚನ …!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಬಸವಣ್ಣನ ಉಂಗುಷ್ಠದಲ್ಲಿ,

ಅಷ್ಟಾಷಷ್ಟಿ ತೀರ್ಥಂಗಳ ಉದಕವ ಮೀರಿದ

ಮಹಾತೀರ್ಥದೊಟ್ಟಿಲ ಕಂಡೆನಯ್ಯಾ !

ಬಸವಣ್ಣನ ಆಧಾರ ಲಿಂಗ ನಾಭಿ ಪರಿಯಂತರವು

ಗುರುಸ್ವರೂಪದೊಟ್ಟಿಲ ಕಂಡೆನಯ್ಯಾ.

ಬಸವಣ್ಣನ ನಾಭಿ ಹೃದಯ ಪರಿಯಂತರವು

ಲಿಂಗಸ್ವರೂಪದೊಟ್ಟಿಲ ಕಂಡೆನಯ್ಯಾ.

ಬಸವಣ್ಣನಗಳ ಮುಖ ಭ್ರೂಮಧ್ಯ ಉನ್ಮನಿ

ಉತ್ತಮಾಂಗ ಪರಿಯಂತರವು

ಜಂಗಮಸ್ವರೂಪದೊಟ್ಟಿಲ ಕಂಡೆನಯ್ಯಾ.

ಬಸವಣ್ಣನ ವಿಶ್ವತೋಮುಖವನುಳ್ಳ ಶರೀರದೊಳಗೆ,

ಈ ಪರಿಯ ಕಂಡಾತನೆ ಭಕ್ತ,

ಜಂಗಮವೆಂಬೆನು ಕಾಣಾ ಗುಹೇಶ್ವರಾ.

 

-ಅಲ್ಲಮಪ್ರಭುದೇವರು