Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅಸಂಘಟಿತ ಕಾರ್ಮಿಕರ ಅಪಘಾತ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

 

ದಾವಣಗೆರೆ; ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ಅಸಂಘಟಿತ ಕಾರ್ಮಿಕರು ಇ-ಶ್ರಮ  ಪೆÇೀರ್ಟಲ್ ಮೂಲಕ ನೊಂದಾಯಿತವಾಗಿ ಅಪಘಾತಗೊಂಡ ಫಲಾನುಭವಿಗಳಿಗೆ 2 ಲಕ್ಷ ಅಪಘಾತ  ಪರಿಹಾರಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.

ಫಲಾನುಭವಿಗಳು  26 ಆಗಸ್ಟ್ 2021 ರಿಂದ 31 ಮಾರ್ಚ್ 2022ರ ಒಳಗಾಗಿ ನೊಂದಾಯಿಸಿ ಅಪಘಾತಗೊಂಡವರಿಗೆ ಪರಿಹಾರ ಪಡೆಯಲು  ಅವಕಾಶ ಕಲ್ಪಿಸಲಾಗಿದೆ.

ಅಪಘಾತದಿಂದ ಮರಣ ಹೊಂದಿದಲ್ಲಿ ಸಲ್ಲಿಸಬೇಕಾದ ದಾಖಲೆಗಳು: ಫಲಾನುಭವಿಯ ಆಧಾರ್ ಸಂಖ್ಯೆ, ಇ-ಶ್ರಮ್ ಕಾರ್ಡ್ ಸಂಖ್ಯೆ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಇಫ್.ಐ.ಆರ್ ಪ್ರತಿ ಹಾಗೂ ಅಪಘಾತದಿಂದ ಅಂಗವೈಕಲ್ಯ ಹೊಂದಿದ್ದಲ್ಲಿ ಸಲ್ಲಿಸಬೇಕಾದ ದಾಖಲೆಗಳು: ಫಲಾನುಭವಿಯ ಆಧಾರ್ ಸಂಖ್ಯೆ, ಇ-ಶ್ರಮ್ ಕಾರ್ಡ್ ಸಂಖ್ಯೆ, ಅಪಘಾತದಿಂದ ಉಂಟಾದ ಅಂಗವೈಕಲ್ಯವನ್ನು ಸೂಚಿಸುವ ಆಸ್ಪತ್ರೆ ದಾಖಲೆಗಳನ್ನು ನಗರದ ಡಿ. ದೇವರಾಜು ಅರಸು ಬಡಾವಣೆಯಲ್ಲಿರುವ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.08192237332ಗೆ ಸಂಪರ್ಕಿಸಬಹುದೆಂದು  ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ. ಇಬ್ರಾಹಿಂ ಸಾಬ್ ತಿಳಿಸಿದ್ದಾರೆ.