Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ – 11ಮಂದಿ ಸಾವು, 12 ಪರ್ವತಾರೋಹಿಗಳು ನಾಪತ್ತೆ

ಜಕಾರ್ತ: ಇಂಡೋನೇಷ್ಯಾದ ಮೌಂಟ್ ಮರಾಪಿಯಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ ಹಿನ್ನಲೆ 11 ಪರ್ವತಾರೋಹಿಗಳು ಸಾವನ್ನಪ್ಪಿದ್ದಾರೆ. 12ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಸುಮಾತ್ರಾದಲ್ಲಿ ಭಾನುವಾರ ಜ್ವಾಲಾಮುಖಿ ಸ್ಫೋಟಗೊಂಡಿದೆ. ಈ ವೇಳೆ ಅಲ್ಲಿ 75 ಜನರು ಇದ್ದರು ಎನ್ನಲಾಗಿದೆ. ಜ್ವಾಲಾಮುಖಿ ಸ್ಫೋಟದ ಬಳಿಕ ರಕ್ಷಣಾ ತಂಡಗಳು ಧಾವಿಸಿ 14 ಜನರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಮೊದಲು ನಾಪತ್ತೆಯಾಗಿದ್ದವರಲ್ಲಿ ಮೂವರನ್ನು ಜೀವಂತವಾಗಿ ಪತ್ತೆ ಮಾಡಿದ್ದೇವೆ.

11 ಜನರು ಶವವಾಗಿ ಪತ್ತೆಯಾಗಿದ್ದಾರೆ ರಕ್ಷಣಾ ಏಜೆನ್ಸಿಯ ಮುಖ್ಯಸ್ಥ ಅಬ್ದುಲ್ ಮಲಿಕ್ ತಿಳಿಸಿದ್ದಾರೆ.ಇನ್ನೂ ನಾಪತ್ತೆಯದವರ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.