Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂದಿನಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಂದ ಪ್ರತಿಭಟನೆ.!

 

ಬೆಂಗಳೂರು : ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನವೆಂಬರ್ 20 ಅಂದರೆ ಇಂದಿನಿಂದ ಪ್ರತಿಭಟನೆ ಮಾಡಲಿದ್ದಾರೆ . ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಆಫ್ಲೈನ್ ಮೂಲಕ ನೇಮಕಾತಿ ಮಾಡಿಕೊಳ್ಳುಬೇಕೆಂದು ಬೇಡಿಕೆ ಇಟ್ಟಿದ್ದಾರೆ.

ಎಐಟಿಯುಸಿ ಜಯಮ್ಮ ನೇತೃತ್ವದಲ್ಲಿ ಫ್ರೀಡಂಪಾರ್ಕ್​ನಲ್ಲಿ ಅನಿರ್ಧಷ್ಟಾವಧಿವರೆಗೆ ಪ್ರತಿಭಟನೆ ಮಾಡಲಿದ್ದಾರೆ.

ಬೆಂಗಳೂರಿನ 2877 ಅಂಗನವಾಡಿ ಕೇಂದ್ರಗಳಲ್ಲಿ 430 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು 1198 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಕಳೆದ 3-4 ವರ್ಷದಿಂದ ನೌಕರರನ್ನ ನೇಮಕ ಮಾಡಿಲ್ಲ. ಕಳೆದ ಮಾರ್ಚ್ 5 ರಂದು ಭೌತಿಕ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಸಾಕಷ್ಟು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ಸಲ್ಲಿಸಿ 8 ತಿಂಗಳು ಕಳೆದರು ಇಲಾಖೆಯ ಕಡೆಯಿಂದ ಯಾವುದೇ ಉತ್ತರ ಬಂದಿಲ್ಲ. ಹಾಗಾಗಿ ಬೇಡಿಕೆ ಪೂರೈಸುವಂತೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ.