Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂದು ನ.4ರಂದು ಈ ಹಳ್ಳಿಗಳ ಸುತ್ತಾ ಮುತ್ತಾ ವಿದ್ಯುತ್ ವ್ಯತ್ಯಯ

 

ಚಿತ್ರದುರ್ಗ: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ತುರುವನೂರು ಶಾಖಾ ವ್ಯಾಪ್ತಿಯಲ್ಲಿ ಬರುವ ತುರುವನೂರು ಗ್ರಾಮದಲ್ಲಿ ವಸತಿ ವಿನ್ಯಾಸದ ವಿದ್ಯುಧಿಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 4ರಂದು ಬೆಳ್ಳಿಗೆ 11 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಆಡಚಣೆಯಾಗುವ ಮಾರ್ಗಗಳು: ತುರುವನೂರು, ಕರಿಯಮ್ಮನಹಟ್ಟಿ, ಪೇಲೂರಹಟ್ಟಿ 11ಕೆ.ವಿ. ಮಾರ್ಗಗಳು.

ವಿದ್ಯುತ್ ವ್ಯತ್ಯಯ ಆಗುವ ಪ್ರದೇಶಗಳು: ತುರುವನೂರು ವ್ಯಾಪ್ತಿಯ ತುರುವನೂರು, ಕೂನಬೇವು, ಬೆಳಗಟ್ಟ ಮತ್ತು ಗೋನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಗೂ ದ್ಯಾಮವ್ವನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.