Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂದು ಮುರುಘಾ ಶರಣರು ಬಿಡುಗಡೆ ಆಗುತ್ತಾರ.?

 

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವಂತ ಮುರುಘಾ ಶರಣರಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ಆದೇಶದ ಪ್ರಕಾರ ಜೈಲಿನಿಂದ ಬಿಡುಗಡೆ ಮಾಡಲು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಆದೇಶಿಸಿದೆ.

ಜಾಮೀನು ಷರತ್ತಿನ ಭಾಗವಾಗಿ ಇಬ್ಬರು ವ್ಯಕ್ತಿಗಳ ಭದ್ರತಾ ಖಾತರಿ ಪರಿಶೀಲಿಸಿದ ನ್ಯಾಯಮೂರ್ತಿ ಬಿ.ಕೆ ಕೋಮಲಾ ಅವರು, ಬಿಡುಗಡೆ ಆದೇಶ ಹೊರಡಿಸಿದ್ದಾರೆ. ಕೋರ್ಟ್ ಆದೇಶದ ಪ್ರತಿ ಕಾರಾಗೃಹ ಅಧಿಕಾರಿಗಳ ಕೈ ಸೇರುವುದು ತಡವಾಗಿದ್ದರಿಂದ ಗುರುವಾರದ ಇಂದು ಬೆಳಗ್ಗೆ ಬಿಡುಗಡೆ ಆಗುವ ಸಾಧ್ಯತೆಗಳಿವೆ. ಎರಡನೇ ಫೋಕ್ಸೋ ಪ್ರಕರಣದಲ್ಲಿ ಬಾಡಿ ವಾರೆಂಟ್ ಇದೆ. ಹಾಗಾಗಿ ಜಾಮೀನು ಮಂಜೂರಾಗಿಲ್ಲವಾದ್ದರಿಂದ ಬಿಡುಗಡೆ ಆಗಬಹುದಾ ಕಾದ ನೋಡಬೇಕು.!