Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಇಂದು ಸುಮಲತಾ ನಿವಾಸಕ್ಕೆ ಭೇಟಿ ನೀಡಲಿರುವ ಹೆಚ್‌ಡಿಕೆ

ಬೆಂಗಳೂರು: ಮುಂಬರುವ ಲೋಕಸಣಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮೈತ್ರಿಯನ್ನು ಬೆಂಬಲಿಸುವಂತೆ ಇಂದು ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ಅವರು ಸುಮಲತಾ ಅಂಬರೀಶ್ ಅವರನ್ನು ಭೇಟಿಯಾಗಲಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರು ಪಕ್ಷೇತರರಾಗಿ ಸ್ಪರ್ಧೆ ಮಾಡಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಜಯ ಗಳಿಸಿದ್ದರು. ಬಳಿಕ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿಯು ಸುಮಲತಾ ಅವರನ್ನು ಮಂಡ್ಯದಿಂದ ಕಣಕ್ಕಿಳಿಸದೆ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.

ಇನ್ನು ಕಳೆದ ಚುನಾವಣೆ ವೇಳೆ ಕುಮಾರಸ್ವಾಮಿ ಹಾಗೂ ಸುಮಲತಾ ಅವರ ನಡುವೆ ಮಾತಿನ ಸಮರವೇ ನಡೆದಿತ್ತು. ಇದೀಗ ಬಿಜೆಪಿ – ಜೆಡಿಎಸ್ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಈ ಮೈತ್ರಿಯನ್ನು ಬೆಂಬಲಿಸುವಂತೆ ಕೋರಲು ಸುಮಲತಾ ಅವರ ಬೆಂಗಳೂರು ನಿವಾಸಕ್ಕೆ ಇಂದು ಮಧ್ಯಾಹ್ನ 3 ಗಂಟೆಗೆ ಹೆಚ್‌ಡಿಕೆ ಭೇಟಿ ನೀಡಿ ಸಮಾಲೋಚನೆ ನಡೆಸಲಿದ್ದಾರೆ.