Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಈ. ವಿಶಾಲ ಅವರಿಗೆ ಪಿಹೆಚ್‍ಡಿ ಪದವಿ

 

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಹಳೇಕುಂದೂರು ಗ್ರಾಮದ ಮಹೇಶ್ವರಮ್ಮ ಹಾಗೂ ನಿವೃತ್ತ ಶಿಕ್ಷಕ ಕೆ.ಈಶ್ವರಪ್ಪ ಅವರ ಪುತ್ರಿ ಈ.ವಿಶಾಲ ಅವರಿಗೆ ಜೀವ ರಾಸಾಯನಶಾಸ್ತ್ರ ವಿಷಯದಲ್ಲಿ ಈಚೆಗೆ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಪಿಹೆಚ್‍ಡಿ ಪದವಿ ಪ್ರಧಾನ ಮಾಡಲಾಯಿತು.

ಜೀವ ರಾಸಾಯನಶಾಸ್ತ್ರ ವಿಭಾಗದ ಪ್ರೊ. ವಡ್ಲಪುಡಿ ಕುಮಾರ್ ಹಾಗೂ ಆಹಾರ ತಂತ್ರಜ್ಞಾನ ವಿಭಾಗದ ಡಾ.ಪೂರ್ಣಿಮಾ ಅವರ ಮಾರ್ಗದರ್ಶನದಲ್ಲಿ  “ In vitro Plant regeneration and Production of Terpenoids and Saponins in cell and Tissue Culture of Gnidia Glauca (Fresen) Gilg” ವಿಷಯದಲ್ಲಿ ನಡೆಸಿದ ಸಂಶೋಧನಾ ಕಾರ್ಯಕ್ಕೆ ಜೀವರಸಾಯನ ಶಾಸ್ತ್ರದಲ್ಲಿ ಪಿಹೆಚ್‍ಡಿ ಲಭಿಸಿದೆ.