Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

—-ಉಗ್ಘಡಿಸುವ ಗಬ್ಬಿದೇವಯ್ಯ ಅವರ ವಚನ ……

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಜ್ಞಾನ ಬಾ, ಮಾಯೆ ಹೋಗೆಂದು ಕಳುಹುತ್ತಿದ್ದೇನೆ.

ಅರಿವು ಬಾ, ಅಜ್ಞಾನ ಹೋಗೆಂದು ಕಳುಹುತ್ತಿದ್ದೇನೆ.

ನಿಃಕಲ ಬಾ, ಸಕಲ ಹೋಗೆಂದು ಕಳುಹುತ್ತಿದ್ದೇನೆ.

ನಿಃಪ್ರಪಂಚ ಬಾ, ಪ್ರಪಂಚ ಹೋಗೆಂದು ಕಳುಹುತ್ತಿದ್ದೇನೆ.

ಕೂಡಲಸಂಗಮದೇವರಲ್ಲಿ ಬಸವಣ್ಣನ ಬಲ್ಲವರನೊಳಗೆ ಕೂಡಿಅರಿಯದವರ ಹೊರಗೆ ತಡೆವುತ್ತಿದ್ದೇನೆ.

 

-ಉಗ್ಘಡಿಸುವ ಗಬ್ಬಿದೇವಯ್ಯ