Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಉರುಳಿಬಿದ್ದ 120 ಅಡಿ ಎತ್ತರದ ಬೃಹತ್ ತೇರು: ಜಾತ್ರೆಗೆ ಆಗಮಿಸುತ್ತಿದ್ದ ವೇಳೆ ದುರ್ಘಟನೆ

ಬೆಂಗಳೂರು : ಹುಸ್ಕೂರು ಮದ್ದೂರಮ್ಮ ಜಾತ್ರೆಗೆ ಆಗಮಿಸುತ್ತಿದ್ದ ಬೃಹತ್ ತೇರೊಂದು ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಮ್ಮಸಂದ್ರದಲ್ಲಿ ನಡೆದಿದೆ.

ಹಿಲಲಿಗೆ ಗ್ರಾಮದಿಂದ 120 ಅಡಿ ಎತ್ತರದ ತೇರನ್ನು ಹುಸ್ಕೂರಿಗೆ ಎಳೆದು ತರಲಾಗುತ್ತಿತ್ತು. ಈ ವೇಳೆ ಕಮ್ಮಸಂದ್ರದ ಬಳಿ ತೇರು ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಎತ್ತುಗಳು, ಟ್ರ್ಯಾಕ್ಟರ್ ಮೂಲಕವಾಗಿ ತೇರನ್ನು ಎಳೆದು ತರಲಾಗುತ್ತಿತ್ತು. ಈ ವೇಳೆ ಏಕಾಏಕಿ ತೇರು ಉರುಳಿ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ, ಜಾತ್ರೆಗೆ ತೆರಳುತ್ತಿದ್ದ ಬೃಹತ್ ತೇರು ಏಕಾಏಕಿ ನಿಯಂತ್ರಣ ತಪ್ಪಿ ಬಿದ್ದಿರುವುದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ.