Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್

ನವದೆಹಲಿ: ಸರಕಾರಿ ಹ್ಯಾಕರ್ಸ್ ಗಳು ತಮ್ಮ ಐಫೋನ್‍ಗಳಿಗೆ ಕನ್ನ ಹಾಕಲು ಯತ್ನಿಸಿರುವ ಸಾಧ್ಯತೆ ಇದೆ ಎಂದು ಸ್ವತಂತ್ರ ಪತ್ರಕರ್ತರು ಮತ್ತು ವಿರೋಧ ಪಕ್ಷದ ರಾಜಕಾರಣಿಗಳಿಗೆ ಕಂಪನಿ ಎಚ್ಚರಿಕೆ ನೀಡಿದ ನಂತರ ಕೇಂದ್ರ ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಈ ಆರೋಪವನ್ನು ನಿರಾಕರಿಸಿದ್ದಾರೆ.

ಭಾರತೀಯ ಪತ್ರಕರ್ತರು ಮತ್ತು ವಿರೋಧ ಪಕ್ಷದ ರಾಜಕಾರಣಿಗಳಿಗೆ ಅಕ್ಟೋಬರ್‍ ನಲ್ಲಿ ಸರ್ಕಾರಿ ಹ್ಯಾಕರ್ಸ್ ಗಳು ಬಹುಶಃ ಅವರ ಐಫೋನ್ ಗಳನ್ನು ಹ್ಯಾಕ್ ಮಾಡಲು ಪ್ರಯತ್ನಿಸಿದ್ದಾರೆ ಎಂದು ಎಚ್ಚರಿಸಿದ ಒಂದು ದಿನದ ನಂತರ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಅಧಿಕಾರಿಗಳು ತಕ್ಷಣವೇ ಆಪಲ್ ಸಂಸ್ಥೆ ವಿರುದ್ಧ ಕ್ರಮ ಕೈಗೊಂಡರು.

ಸಂಸದರಿಗೆ ಐಫೋನ್ ಎಚ್ಚರಿಕೆಗಳ ಕುರಿತು ಆಪಲ್ ತಂಡವು ಈ ತಿಂಗಳು ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಲಿದೆ ಸಂಸದರಿಗೆ ಐಫೋನ್ ಎಚ್ಚರಿಕೆಗಳ ಕುರಿತು ಆಪಲ್ ತಂಡವು ಈ ತಿಂಗಳು ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಲು ತೀರ್ಮಾನಿಸಿದೆ.