Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕರ್ನಾಟಕ ಸರ್ಕಾರದ ಭ್ರಷ್ಟಾಚಾರದಿಂದ ಉದ್ಯಮಗಳು ಬೇರೆ ರಾಜ್ಯಗಳಿಗೆ ವರ್ಗಾವಣೆ – ಕಿಶನ್‌ ರೆಡ್ಡಿ ಆರೋಪ

ಹೈದರಾಬಾದ್‌ : ಕಾಂಗ್ರೆಸ್‌ ಆಡಳಿತದಿಂದ ರಾಜ್ಯದ ಜನ ಬೇಸತ್ತಿದ್ದಾರೆ. ಒಂದು ವೇಳೆ ಕರ್ನಾಟಕದಲ್ಲಿ ಈಗಲೇ ಚುನಾವಣೆ ನಡೆದರೆ ಬಿಜೆಪಿ ಅತ್ಯಧಿಕ ಬಹುಮತದಿಂದ ಜಯಗಳಿಸಲಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಜನರು ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಕಿಶನ್‌ ರೆಡ್ಡಿ ಹೇಳಿದ್ದಾರೆ.

ಹೈದರಾಬಾದ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕರ್ನಾಟದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಈ ಕಾರಣದಿಂದಲೇ ಅನೇಕ ಉದ್ಯಮಗಳು ಮುಚ್ಚಿಹೋಗಿವೆ. ಇಲ್ಲವೇ ಬೇರೆ ರಾಜ್ಯಗಳಿಗೆ ವರ್ಗಾವಣೆಯಾಗಿವೆ ಎಂದಿದ್ದಾರೆ.

ಕರ್ನಾಟದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿರುವ ತೆಲಂಗಾಣ ಬಿಜೆಪಿ ಅಧ್ಯಕ್ಷ ಕಿಶನ್‌ ರೆಡ್ಡಿ, ಕಾಂಗ್ರೆಸ್‌ನ ಭ್ರಷ್ಟಾಚಾರದಿಂದಾಗಿ ರಾಜ್ಯದಲ್ಲಿನ ಅನೇಕ ಉದ್ಯಮಗಳು ಮುಚ್ಚಿಹೋಗಿವೆ ಎಂದು ಆರೋಪಿಸಿದ್ದಾರೆ.