Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕಳಮಶ್ಶೇರಿ ಬಾಂಬ್ ಸ್ಫೋಟ: ಬಾಲಕಿ ಸೇರಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆ

ಕೊಚ್ಚಿ: ಕೇರಳದ ಎರ್ನಾಕುಲಂನ ಕಳಮಶ್ಶೇರಿಯಲ್ಲಿ ನಡೆದ ಸರಣಿ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. 12 ವರ್ಷದ ಬಾಲಕಿ ಹಾಗೂ ಇಬ್ಬರು ಮಹಿಳೆಯರು ಸೇರಿ ಮೂವರು ಮೃತಪಟ್ಟಿದ್ದು 11 ಮಂದಿಯ ಸ್ಥಿತಿ ಗಂಭೀರವಾಗಿದೆ.

ಮೃತರನ್ನು ಲಿಯೋನಾ ಪೌಲೋಸ್ (55), ಕುಮಾರಿ(52) ಹಾಗೂ ಬಾಲಕಿ ಲಿಬಿನ (12) ಎಂದು ಗುರುತಿಸಲಾಗಿದೆ.

ಭಾನುವಾರ ಸ್ಫೋಟ ಸಂಭವಿಸಿದಾಗ 2,000ಕ್ಕೂ ಹೆಚ್ಚು ಜನರು ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದರು . ೫೭ ವರ್ಷದ ಡೊಮಿನಿಕ್ ಮಾರ್ಟಿನ್ ಎಂಬಾತ ತಾನೇ ಬಾಂಬ್ ಇಟ್ಟಿದ್ದು ಅಂತ ಪೊಲೀಸರ ಮುಂದೆ ಶರಣಾಗಿದ್ದಾನೆ. ಯೂಟ್ಯೂಬ್ ನೋಡಿ ಬಾಂಬ್ ತಯಾರಿಸುವ ಬಗ್ಗೆ ತಿಳಿದುಕೊಂಡಿದ್ದು, ತಾನು ಖರೀದಿಸಿದ ವಸ್ತುಗಳ ಬಗ್ಗೆ ಬಿಲ್ ಸಹಿತ ಮಾಹಿತಿ ನೀಡಿದ್ದಾನೆ ಎಂದು ತಿಳಿದುಬಂದಿದೆ.