Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕಾಫಿನಾಡಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ, ಆನೆ ನಿಗ್ರಹ ಪಡೆಯ ಸದಸ್ಯ ಆನೆ ದಾಳಿಗೆ ಸಾವು

ಚಿಕ್ಕಮಗಳೂರು : ಆನೆ ತುಳಿತಕ್ಕೆ ಆನೆ ನಿಗ್ರಹ ಪಡೆಯ ಸದಸ್ಯನೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಗೌಡ (26) ಆನೆ ತುಳಿತಕ್ಕೆ ಮೃತ ದುರ್ದೈವಿ. ಕಾರ್ತಿಕ್ ಗೌಡ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ನಿವಾಸಿಯಾಗಿದ್ದು, ಸರ್ಕಾರ ರಚಿತ ಆನೆ ನಿಗ್ರಹ ಪಡೆಯಲ್ಲಿ ಕೆಲಸ ಮಾಡುತ್ತಿದ್ದ. ಬೈರಾಪುರದಲ್ಲಿ ಆನೆ ಓಡಿಸುವಾಗ ಆನೆ ದಾಳಿಗೆ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 20 ದಿನದ ಹಿಂದೆ ಆಲ್ದೂರಿನಲ್ಲಿ ವೀಣಾ ಎಂಬ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಳು. ಒಂದೂವರೆ ತಿಂಗಳ ಹಿಂದೆ ಆಲ್ದೂರು ಸಮೀಪ ಚಿನ್ನಿ ಎಂಬುವರು ಸಾವನ್ನಪ್ಪಿದ್ದರು. ಇದೀಗ ಆನೆ ನಿಗ್ರಹ ಪಡೆಯ ಸದಸ್ಯನೇ ಆನೆ ದಾಳಿಗೆ ಸಾವನ್ನಪ್ಪಿದ್ದು, ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.