Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕಾರಿಗೆ ಟ್ರಕ್ ಡಿಕ್ಕಿ-ಭೀಕರ ಅಪಘಾತದಲ್ಲಿ ಆರು ಮಂದಿ ಸಾವು

ನಾಗ್ಪುರ: ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಪರಿಣಾಮ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕಟೋಲ್ ತಾಲೂಕಿನ ಸೋನ್ಖಾಂಬ್ನಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.

ಮೃತರನ್ನು ಅಜಯ್ ದಶರತ್ ಚಿಖಲೆ (45), ವಿಠ್ಠಲ್ ದಿಗಂಬರ ತೋಟೆ (45), ಸುಧಾಕರ ರಾಮಚಂದ್ರ ಮಾನಕರ್ (42),ರಮೇಶ್ ಓಂಕಾರ್ ಹೆಲೊಂಡೆ (48), ಮಯೂರ್ ಮೊರೇಶ್ವರ್ ಇಂಗಳೆ (26) ಮತ್ತು ವೈಭವ್ ಸಾಹೇಬರಾವ್ ಚಿಖಲೆ (32) ಎಂದು ಗುರುತಿಸಲಾಗಿದೆ.

ನಾಗ್ಬುರದಿಂದ ಕಟೋಲ್‌ ಕಡೆಗೆ ಕಾರಿನಲ್ಲಿ ಏಳು ಜನರು ಪ್ರಯಾಣಿಸುತ್ತಿದ್ದಾಗ ಟ್ರಕ್‌ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡವರನ್ನು ನಾಗ್ಬುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.