Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ್ ಬಂಧನ.!

 

 

ಚಿಕ್ಕಮಗಳೂರು: ಬಸ್ ಚಾಲಕರೊಬ್ಬರ ವರ್ಗಾವಣೆಗೆ 10 ಸಾವಿರ ಲಂಚ ಪಡೆದ ಆರೋಪದಲ್ಲಿ ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕರೊಬ್ಬರು ಕಡೂರು ಘಟಕಕ್ಕೆ ವರ್ಗಾವಣೆ ಮಾಡಲು ಮನವಿ ಸಲ್ಲಿಸಿದ್ದರು. ಈ ಮನವಿ ಪುರಸ್ಕರಿಸಿ ವರ್ಗಾವಣೆ ಮಾಡಲು ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಚಾಲಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಬಸವರಾಜ್ ಅವರು ತಮ್ಮ ಕಾರು ಚಾಲಕ ನಾಗರಾಜ್ ಮೂಲಕ ಲಂಚ ಪಡೆಯುತ್ತಿದ್ದಾಗ ಇಬ್ಬರನ್ನೂ ಬಂಧಿಸಲಾಗಿದೆ. ತನಿಖೆ ಮುಂದುವರಿದಿದೆ. ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.