Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಖಾಸಗಿ ಬಸ್ ಸೇತುವೆಯಿಂದ ರೈಲ್ವೆ ಹಳಿ ಮೇಲೆ ಬಿದ್ದು 4 ಮಂದಿ ಸಾವು.!

 

ರಾಜಸ್ಥಾನ:  ಖಾಸಗಿ ಬಸ್ ಸೇತುವೆಯಿಂದ ರೈಲ್ವೆ ಹಳಿ ಮೇಲೆ ಬಿದ್ದ ಪರಿಣಾಮ ಕನಿಷ್ಠ 4ಮಂದಿ  ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿರುವ ಘಟನೆ ದೌಸಾ ಜಿಲ್ಲೆಯಲ್ಲಿ ಎಂದು ತಿಳಿದುಬಂದಿದೆ.

ಭಾನುವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ದೌಸಾ ಕಲೆಕ್ಟರೇಟ್ ಸರ್ಕಲ್ ಬಳಿ ಈ ದುರಂತ ಸಂಭವಿಸಿದೆ. ಹರಿದ್ವಾರದಿಂದ 30 ಮಂದಿ ಪ್ರಯಾಣಿಕರೊಂದಿಗೆ ಜೈಪುರಕ್ಕೆ ತೆರಳುತ್ತಿದ್ದ ಬಸ್‌, ಜೈಪುರ-ದೆಹಲಿ ರೈಲ್ವೆ ಮಾರ್ಗದಲ್ಲಿ ಸ್ಕಿಡ್ ಆಗಿ ರೈಲು ಹಳಿ ಮೇಲೆ ಬಿದ್ದಿದೆ. ಅಪಘಾತದ ನಂತರ ತಕ್ಷಣವೇ ಅವ್ಯವಸ್ಥೆ ಉಂಟಾಯಿತು.

ಸ್ಥಳೀಯರು ತಕ್ಷಣ ಧಾವಿಸಿ ರಕ್ಷಣೆ ಮಾಡಿದ್ದಾರೆ, ಕೆಲ ನಿಮಿಷದಲ್ಲೇ ಪೊಲೀಸರು, ಆ್ಯಂಬುಲೆನ್ಸ್​ ಸ್ಥಳಕ್ಕೆ ಆಗಮಿಸಿತ್ತು. ಗಾಯಗೊಂಡ ಸಂತ್ರಸ್ತರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವರದಿಗಳ ಪ್ರಕಾರ, ಗಾಯಗೊಂಡ ಹಲವರ ಪರಿಸ್ಥಿತಿ ಗಂಭೀರವಾಗಿದೆ. ಗಂಭೀರ ಸ್ಥಿತಿಯಲ್ಲಿದ್ದವರನ್ನು ಜೈಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆಯಂತೆ.!