Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಖ್ಯಾತ ಗಜಲ್ ಗಾಯಕ ಪಂಕಜ್ ಉಧಾಸ್ ಇನ್ನಿಲ್ಲ.!

 

ಮುಂಬೈ: ಖ್ಯಾತ ಗಜಲ್ ಗಾಯಕ ಪಂಕಜ್ ಉಧಾಸ್ ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮುಂಬೈನ ಬೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ 72ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

2006ರಲ್ಲಿ ಅವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು. ಹಿಂದಿ ಮಾತ್ರವಲ್ಲದೆ, ಕನ್ನಡದಲ್ಲಿಯೂ ಹಿನ್ನೆಲೆ ಗಾಯಕರಾಗಿ ಪಂಕಜ್ ಹಾಡಿದ್ದಾರೆ. ಸ್ಪರ್ಶ ಚಿತ್ರದ ಬರೆಯದ ಮೌನದ ಕವಿತೆ ಹಾಡಾಯಿತು, ಚಂದಕ್ಕಿಂತ ಚಂದ.. ಹಾಡುಗಳನ್ನು ಪಂಕಜ್‌ ಅವರೇ ಹಾಡಿದ್ದಾರೆ ಎಂಬುದು ವಿಶೇಷ.!