Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಗಗನಯಾನ: ಬಾಹ್ಯಾಕಾಶಕ್ಕೆ ಹಾರಲಿರುವ ನಾಲ್ವರು ಗಗನಯಾತ್ರಿಗಳ ಹೆಸರು ಘೋಷಿಸಿದ ಪ್ರಧಾನಿ ಮೋದಿ

ತಿರುವನಂತಪುರ: ಬಾಹ್ಯಾಕಾಶ ಯಾನ ಗಗನಯಾನಗೆ ತರಬೇತಿ ಪಡೆಯುತ್ತಿರುವ ನಾಲ್ವರು ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಘೋಷಿಸಿದ್ದಾರೆ.

ಕೇರಳ ರಾಜ್ಯದ ರಾಜಧಾನಿ ಬಳಿಯ ತುಂಬಾದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಭೇಟಿ ನೀಡಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಗಗನಯಾನ ಮಿಷನ್ ಗೆ ಆಯ್ಕೆಯಾಗಿರುವ ನಾಲ್ಕು ಮಂದಿ ಗಗನಯಾನಿಗಳ ಹೆಸರನ್ನು ಘೋಷಣೆ ಮಾಡುವ ಮೂಲಕ ಪರಿಚಯಿಸಿದರು.

ಪ್ರಧಾನಿ ಮೋದಿ ಘೋಷಣೆ ಮಾಡಿದ ನಾಲ್ವರು ಗಗನಯಾತ್ರಿಗಳೆಂದರೆ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಅಂಗದ್ ಪ್ರತಾಪ್, ಅಜಿತ್ ಕೃಷ್ಣನ್ ಮತ್ತು ಶುಭಾಂಶು ಶುಕ್ಲಾ.

ನಾಲ್ಕು ಮಂದಿ ಗಗನಯಾತ್ರಿಗಳಿಗೆ ಗಗನಯಾನದ ಕಿಟ್ ನೀಡುವ ಮೂಲಕ ಪ್ರಧಾನಿ ಮೋದಿ ಅವರಿಗೆ ಶುಭ ಕೋರಿದರು. ಅಲ್ಲದೆ ಅವರು ದೇಶದ 1.4 ಬಿಲಿಯನ್ ಜನರ ಆಕಾಂಕ್ಷೆಗಳನ್ನು ಒಳಗೊಂಡಿರುವ ನಾಲ್ಕು ಶಕ್ತಿಗಳು ಎಂದೂ ಬಣ್ಣಿಸಿದರು.