Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

–ಚಂದಿಮರಸ ಅವರ ವಚನ …!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಇಂದ್ರಿಯಂಗಳೊಡಗೂಡಿ ಬಹಿರ್ಮುಖನಾಗಿ

ವಿಷಯಂಗಳಲ್ಲಿ ಆಸಕ್ತಿಯುಳ್ಳವನು ಅಂತರ್ಮುಖ ರೂಪನಪ್ಪ,

ಪ್ರತ್ಯಗಾತ್ಮನನೆಂತೂ ಕಾಣಲರಿಯೆನು.

ಮೇರುಗಿರಿಯ ಕಂಡೆಹೆನೆಂದು ತೆಂಕಮುಖನಾಗಿ ನಡೆದು

ಮೇರುಗಿರಿಯ ಕಾಣಲರಿಯನೆಂತಂತೆ,

ಸಕಲ ವಿಷಯಾಸಕ್ತಿಯ ಬಿಟ್ಟು ನಿರ್ವಿಷಯಿಯಾಗಿ

ನಿಜದಲ್ಲಿ ನಿಂದ ನಿಲವು ನೀನೇ,ಸಿಮ್ಮಲಿಗೆಯ ಚೆನ್ನರಾಮಾ.

 

-ಚಂದಿಮರಸ