Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಚರ್ಮ ಕುಶಲ ಕರ್ಮಿಗಳಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 

ದಾವಣಗೆರೆ, : ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಸ್ವಯಂ ಉದ್ಯೋಗ ಯೋಜನೆಗಳಿಗೆ ಚರ್ಮ ಕುಶಲಕರ್ಮಿಗಳಿಂದ ಸೇವಾ ಸಿಂಧು ಪೆÇೀರ್ಟಲ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಕೌಶಲ್ಯ ಅಭಿವೃದ್ಧಿ ಮತ್ತು ಆದಾಯಗಳಿಕೆಗಾಗಿ ತರಬೇತಿ ಶಿಬಿರ, ವಸತಿ ಕಾರ್ಯಗಾರ ಯೋಜನೆ, ಸ್ವಾವಲಂಬಿ ಅಥವಾ ಸಂಚಾರಿ ಮಾರಾಟ ಮಳಿಗೆ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆಯಡಿ ಸಹಾಯಧನ, ಪಾದುಕೆ ಕುಟೀರ, ಚರ್ಮ ಶಿಲ್ಪ ಯಂತ್ರಾಧಾರಿತ ಉತ್ಪಾದನಾ ಘಟಕಗಳನ್ನು ಸ್ಥಾಪಿಸುವ ಯೋಜನೆ, ನೇರ ಸಾಲ ಯೋಜನೆಗಳಡಿ ಸೌಲಭ್ಯಗಳನ್ನು ಒದಗಿಸಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ 19 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಮೊ. ನಂ. 9480886279 ಮತ್ತು 7996104988 ಗೆ  ಸಂಪರ್ಕಿಸಲು ಡಾ.ಬಾಬು ಜಗಜೀವನ್ ರಾಂ ಚರ್ಮ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕ ಎಂ. ಗಂಗಾಧರ ತಿಳಿಸಿದ್ದಾರೆ