Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಚುನಾವಣಾ ನೀತಿ ಸಂಹಿತೆ ನಿಯಮ ಉಲ್ಲಂಘನೆ – ಡಿಜಿ, ಐಜಿಪಿ ಅಂಜನಿ ಕುಮಾರ್ ಸೇವೆಯಿಂದ ಅಮಾನತು

ತೆಲಂಗಾಣ:  ತೆಲಂಗಾಣ ಚುನಾವಣಾ ಪ್ರಕ್ರಿಯೆ ಮುಗಿಯದಿದ್ದರೂ ಮತ್ತು ಫಲಿತಾಂಶ ಪ್ರಕಟವಾಗುವ ಮೊದಲೇ ಒಂದು ಪಕ್ಷದ ವ್ಯಕ್ತಿಯನ್ನು ಭೇಟಿ ಮಾಡಿ ಶುಭ ಕೋರಿದ ತೆಲಂಗಾಣದ ಪೊಲೀಸ್ ಮಹಾ ನಿರ್ದೇಶಕ ಅಂಜನಿ ಕುಮಾರ್ ಅವರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ಎಎನ್​ಐ ಸುದ್ದಿಸಂಸ್ಥೆ ತಿಳಿಸಿದೆ.

ತೆಲಂಗಾಣದ ಡಿಜಿ ಮತ್ತು ಐಜಿ ಆಗಿರುವ ಅಂಜನಿ ಕುಮಾರ್ ಹಾಗು ಪೊಲೀಸ್ ಅಧಿಕಾರಿಗಳಾದ ಸಂಜಯ್ ಜೈನ್ ಮತ್ತು ಮಹೇಶ್ ಭಗವತ್ ಈ ಮೂವರುಗಳು ತೆಲಂಗಾಣ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಹಾಗೂ ಚುನಾವಣೆ ಅಭ್ಯರ್ಥಿ ರೇವಂತ್ ರೆಡ್ಡಿ ಅವರ ನಿವಾಸಕ್ಕೆ ತೆರಳಿ ಭೇಟಿ ಮಾಡಿ ಶುಭಾಶಯ ಕೋರಿದ್ದಾರೆ.

ಈ ಕುರಿತಾದ ಫೋಟೋ ಮಾಧ್ಯಮಗಳಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತು ಕೊಂಡ ಚುನಾವಣಾ ಆಯೋಗ ಸಮಿತಿ, ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆರೋಪವನ್ನು ಹೊರಿಸಿ ಅಂಜನಿ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.