Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಚುನಾವಣಾ ರಾಜಕಾರಣದಿಂದ ಹಿರಿಯ ನಾಯಕರು ದೂರವಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತೆ’ – ಡಿವಿಎಸ್

ಮಂಡ್ಯ: ಚುನಾವಣಾ ರಾಜಕಾರಣದಿಂದ ಹಿರಿಯ ನಾಯಕರು ದೂರವಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಪಕ್ಷದ ರಾಷ್ಟ್ರೀಯ ಮುಖಂಡರು ಅಲೋಚನೆ ಮಾಡಬೇಕು ಎಂದು ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಹಿರಿಯ ನಾಯಕರಿಗೆ ಹೆಚ್ಚಿನ ಅನುಭವ ಇರುತ್ತದೆ. ಅವರಿಗೆ ಅವರದ್ದೇ ಆದ ಹಿಂಬಾಲಕರ ಪಡೆ ಇರುತ್ತದೆ. ಅವರನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದರ ಬಗ್ಗೆ ವರಿಷ್ಠರು ಚಿಂತನೆ ನಡೆಸಬೇಕು ಎಂದರು.

ಇನ್ನು ನಾನು ಅನೇಕ ವರ್ಷದಿಂದ ರಾಜಕಾರಣದಲ್ಲಿ ಇದ್ದೇನೆ. ನನ್ನನ್ನು ಉಪಯೋಗಿಸಿಕೊಂಡರೆ ಪಕ್ಷಕ್ಕಾಗಿ ದುಡಿಯುತ್ತೇನೆ ಇಲ್ಲವಾದಲ್ಲಿ ಸುಖ ಜೀವನದಲ್ಲಿ ಇರುತ್ತೇನೆ” ಎಂದು ಹೇಳಿದ್ದಾರೆ