Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

–ಚೆನ್ನಬಸವಣ್ಣ  ಅವರ ವಚನ ……

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಬೆಲ್ಲದ ನೀರೆರೆದಡೇನು, ಬೇವು ಸಿಹಿಯಪ್ಪುದೆ

ಕತ್ತುರಿಯ ಲೇಪನವಿತ್ತಡೇನು, ನೀರುಳ್ಳೆಯ ದುರ್ಗಂಧ ದೂರಪ್ಪುದೆ ?

ಕಸುಗಾಯ ಹಿಸುಕಿದಡೇನು, ಹಣ್ಣಿಗೆ ಹವಣಪ್ಪುದೆ ?

ಕಿರಿಯ ಮನದ ಮಾನವಂಗೆ ಬಹಿರಂಗದ ಬರಿಯ ಸಂಸ್ಕಾರವಾದಡೇನು,

ಭವಿಯಾಗಿಪ್ಪನಲ್ಲದೆ ಭಕ್ತನಪ್ಪನೆ ಕೂಡಲಚೆನ್ನಸಂಗಮದೇವಾ

ಪೂರ್ವಗುಣವಳಿದು ಪುನರ್ಜಾತನಾಗದನ್ನಕ್ಕ ?

 

-ಚೆನ್ನಬಸವಣ್ಣ