Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ವಲಸೆ ಕಾರ್ಮಿಕ ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಗುಂಡಿಗೆ ಬಲಿಯಾಗಿದ್ದಾನೆ.

ರಾಜು ಷಾ ಎಂದು ಗುರುತಿಸಲಾದ ಕಾರ್ಮಿಕನನ್ನು ದಾಳಿ ಬಳಿಕ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾರ್ಮಿಕ ಸಾವನ್ನಪ್ಪಿದ್ದಾನೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಪೊಲೀಸರು, ಭಯೋತ್ಪಾದಕರ ಗುಂಡೇಟಿನಿಂದ ಗಾಯಗೊಂಡಿದ್ದ ವಲಸೆ ಕಾರ್ಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಬುಧವಾರ ಮುಂಜಾನೆ ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಿಜ್‌ಬೆಹರಾದಿಂದ ಬಂಧಿಸಲಾಯಿತು. ಅವರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಯಿತು. ಕಳೆದ ಸೋಮವಾರ ಡೆಹ್ರಾಡೂನ್ ನಿವಾಸಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದರು. ಆ ಘಟನೆ ನಡೆದ ಒಂದು ವಾರದಲ್ಲೇ ಮತ್ತೊಂದು ದಾಳಿ ನಡೆದಿದೆ. ದಾಳಿಯಲ್ಲಿ ದಿಲ್ರಂಜಿತ್ ಸಿಂಗ್ ಬದುಕಿದ್ದಾನೆ ಎನ್ನಲಾಗಿದೆ.