Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜಿ.ಆರ್.ರಾಮ್ ಪ್ರಸಾದ್‍ಗೆ ಪಿಹೆಚ್‍ಡಿ ಪದವಿ

 

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಗಂಜಿಗಟ್ಟೆ ಗ್ರಾಮದ ನಿವಾಸಿ ಜಿ.ಆರ್.ರಾಮ್ ಪ್ರಸಾದ್ ಅವರು ಅರ್ಥಶಾಸ್ತ್ರ ವಿಷಯದಲ್ಲಿ ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯ ಪಿಹೆಚ್‍ಡಿ ಪದವಿ ನೀಡಿದೆ.

ದಾವಣಗೆರೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಎಸ್.ಸುಚಿತ್ರಾ ಅವರ ಮಾರ್ಗದರ್ಶನದಲ್ಲಿ ‘performance evaluation of PMFBY in Karnataka’  ಎಂಬ ವಿಷಯದ ಕುರಿತು ಮಹಾಪ್ರಬಂಧ ಮಂಡಿಸಿದ್ದರು. ವಿಶ್ವವಿದ್ಯಾಲಯವು ಘಟಿಕೋತ್ಸವದ ಸಂದರ್ಭದಲ್ಲಿ ಪಿಹೆಚ್‍ಡಿ ಪದವಿ  ಪ್ರಧಾನಿಸಲಾಗುವುದು ಎಂದು ತಿಳಿಸಿದೆ.