Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜಿ20 ಶೃಂಗಸಭೆಗೆ ಅಡ್ಡಿಪಡಿಸುವಂತೆ ಕಾಶ್ಮೀರಿ ಮುಸ್ಲಿಮರಿಗೆ ಖಲಿಸ್ತಾನಿ ಪ್ರತ್ಯೇಕತಾವಾದಿ ಸಂದೇಶ

ನವದೆಹಲಿ : ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯುವುದಕ್ಕೆ ಬಿಡಬೇಡಿ ಎಂದು ಕಾಶ್ಮೀರಿ ಮುಸ್ಲಿಮರಿಗೆ ಖಲಿಸ್ತಾನಿ ಪ್ರತ್ಯೇಕತಾವಾದಿ ಮತ್ತು ಸಿಖ್ಸ್ ಫಾರ್ ಜಸ್ಟಿಸ್ ಸಂಸ್ಥಾಪಕ ಗುರುಪತ್‌ವಂತ್ ಸಿಂಗ್ ಪನ್ನುನ್ ಕರೆ ನೀಡಿದ್ದಾರೆ.

ದೆಹಲಿಯಲ್ಲಿ ಸೆಪ್ಟೆಂಬರ್ 9 ಮತ್ತು 10 ರಂದು ಜಿ20 ಶೃಂಗಸಭೆ ನಡೆಯಲಿದ್ದು, ಈ ಹಿನ್ನಲೆ ಕಾಶ್ಮೀರಿ ಮುಸ್ಲಿಮರು ಜಿ20 ಶೃಂಗಸಭೆಗೆ ಅಡ್ಡಿಪಡಿಸಿ ಎಂದು ಆಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ.

ಪ್ರಾರ್ಥನೆಯ ಬಳಿಕ ಶೃಂಗಸಭೆ ನಡೆಯುವ ಪ್ರಗತಿ ಮೈದಾನಕ್ಕೆ ಮೆರವಣಿಗೆ ನಡೆಸುವಂತೆ ಪನ್ನುನ್ ಜನರಿಗೆ ಕರೆ ನೀಡಿದ್ದಾರೆ. ಅಲ್ಲದೆ ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಖಲಿಸ್ತಾನಿ ಧ್ವಜ ಹಾರಿಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ದೆಹಲಿ ಮೆಟ್ರೋ ನಿಲ್ದಾಣಗಳನ್ನು ಖಲಿಸ್ತಾನ್ ಪರ ಗೀಚುಬರಹದಿಂದ ವಿರೂಪಗೊಳಿಸಿದ ಕೆಲವೇ ದಿನಗಳಲ್ಲಿ ಈ ಎಚ್ಚರಿಕೆ ಬಂದಿದೆ.