Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಜೀವ ಉಳಿಸಿದ್ದ ಪತ್ನಿಯನ್ನೇ ಕೊಲೆಮಾಡಿದ  ಪತಿ .!

 

ಮೈಸೂರು:  ಜೀವ ಉಳಿಸಿದ್ದ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಈ ಹಿಂದೆ ಅಕ್ಬರ್ ಅಲಿ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ, ಪತ್ನಿ ನವೀದಾ ತನ್ನ ತವರು ಮನೆಯವರ ನೆರವಿನಿಂದ ಪತಿಗೆ ಚಿಕಿತ್ಸೆ ಕೊಡಿಸಿದ್ದಳು.

ಆರೋಪಿ ಪತಿ ಅಕ್ಬರ್ ಅಲಿಯನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ. ಮಂಡ್ಯ ಮೂಲದ ಅಕ್ಬರ್ ಅಲಿ ಆಟೋ ಚಾಲಕನಾಗಿದ್ದನು. ನವೀದಾ-ಅಕ್ಬರ್ ಅಲಿ ಮದುವೆ ಆಗಿ 13 ವರ್ಷಗಳಾಗಿವೆ. ದಂಪತಿಗೆ ಮೂವರು ಮಕ್ಕಳಿದ್ದು, ಮೈಸೂರಿನ ರಾಜೀವ್ ನಗರದಲ್ಲಿ ನೆಲೆಸಿದ್ದರು.