Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಟಿ20 ಟ್ರೋಫಿ ಅನಾವರಣ: ಜಟಕಾ ಬಂಡಿ ಏರಿದ ಉಭಯ ತಂಡಗಳ ನಾಯಕರು

ಡರ್ಬನ್‌: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟಿ20 ಟ್ರೋಫಿ ಅನಾವರಣ ಸಮಾರಂಭದ ಕಿರು ವಿಡಿಯೋವನ್ನು ಬಿಡುಗಡೆ ಮಾಡಿದೆ. ಈ ವಿಡಿಯೋದಲ್ಲಿ ಉಭಯ ತಂಡಗಳ ನಾಯಕರು ಜಟಕಾ ಬಂಡಿ ಏರಿ, ಟ್ರೋಫಿ ಜೊತೆ ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ.

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ ಇಂದು ಸೌತ್ ಆಫ್ರಿಕಾ ವಿರುದ್ಧ ಡರ್ಬನ್‌ನಲ್ಲಿ ಮೊದಲ ಟಿ20 ಪಂದ್ಯವನ್ನು ಆಡಲಿದೆ. ಪಂದ್ಯಕ್ಕೂ ಮುನ್ನ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ದಕ್ಷಿಣ ಆಫ್ರಿಕಾದ ನಾಯಕ ಏಡೆನ್ ಮಾರ್ಕ್ರಾಮ್ ಡರ್ಬನ್‌ನಲ್ಲಿ ಡಿ. 9 ರಂದು ಟ್ರೋಫಿ ಅನಾವರಣಗೊಳಿಸುವ ಮೂಲಕ ಪಂದ್ಯಕ್ಕೆ ಚಾಲನೆ ನೀಡಿದರು.

ಈ ವಿಡಿಯೋದಲ್ಲಿ ಭಾರತ ತಂಡದ ನಾಯಕ ಹಾಗೂ ದಕ್ಷಿಣ ಆಫ್ರಿಕಾದ ನಾಯಕ ಕೈ-ಕೈ ಜೋಡಿಸಿ ಜಟಕಾ ಬಂಡಿ ಏರಿ ಸವಾರಿ ಮಾಡಿದ್ದಾರೆ. ಜೊತೆಗೆ ಟ್ರೋಫಿ ಜೊತೆ ಫೋಟೋಕ್ಕೆ ಪೋಸ್ ಕೊಟ್ಟಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.