Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಟ್ಯಾಂಕರ್ ಡಿಕ್ಕಿ: ಆಟೋದಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸಾವು

ಕಲಬುರ್ಗಿ: ಆಟೋ – ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಟೋದಲ್ಲಿ ಇದ್ದ 3 ತಿಂಗಳ ಮಗು ಸೇರಿ ಒಂದೇ ಕುಟುಂಬದ ಒಟ್ಟು 6 ಮಂದಿ ಸಾವನ್ನಪ್ಪಿದ ಘಟನೆ ಇಲ್ಲಿನ ಚಿತ್ತಾಪುರ ತಾಲೂಕಿನ ವಾಡಿಯ ಹಲಕರ್ಟಾ ಎಂಬಲ್ಲಿ ನಡೆದಿದೆ.

ಮೃತರನ್ನು ನಾಜ್ಮಿನ್ ಬೇಗಂ(28), ಬೀಬಿ ಫಾತಿಮಾ(12), ಅಬೂಬಕರ್(4), ಬೀಬಿ ಮರಿಯಮ್(3 ತಿಂಗಳು), ಮೊಹಮ್ಮದ್ ಪಾಷಾ(20) ಹಾಗೂ ಆಟೋ ಚಾಲಕ ಬಾಬಾ(35) ಎಂದು ಗುರುತಿಸಲಾಗಿದೆ.

ಇವರ ಜೊತೆಗಿದ್ದ 10 ವರ್ಷದ ಬಾಲಕ ಮುಹಮ್ಮದ್ ಹುಸೇನ್ ಗಂಭೀರವಾಗಿ ಗಾಯಗೊಂಡಿದ್ದು ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ. ಮೃತಪಟ್ಟವರೆಲ್ಲೂ ನಾಲವಾರ ಗ್ರಾಮದ ಒಂದೇ ಕುಟುಂಬದವರಾಗಿದ್ದು ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಿಸಲು ಚಿತ್ತಾಪುರಕ್ಕೆ ಹೋಗಿ ವಾಪಸ್ ಗ್ರಾಮಕ್ಕೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಟ್ಯಾಂಕರ್‍ ಚಾಲಕನ ಅಜಾಗರೂಕತೆಯಿಂದ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಈ ಬಗ್ಗೆ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.