Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ತೆಲಂಗಾಣ: ಹಂಗಾಮಿ ಸ್ಪೀಕರ್ ಆಗಿ ಅಕ್ಬರುದ್ದೀನ್ ನೇಮಕ – ಪ್ರಮಾಣ ವಚನ ಸ್ವೀಕರಿಸಲು ಬಿಜೆಪಿಯ ಶಾಸಕರು ನಕಾರ

ಹೈದರಾಬಾದ್‌: ತೆಲಂಗಾಣ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಎಐಎಂಐಎಂನ ಅಕ್ಬರುದ್ದೀನ್ ಓವೈಸಿ ಅವರನ್ನು ನೇಮಕ ಮಾಡಿರುವುದಕ್ಕೆ ಬಿಜೆಪಿ ಶಾಸಕರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ಚುನಾವಣೆಯಲ್ಲಿ ಗೆದ್ದಿರುವ ಎಲ್ಲಾ ಎಂಟು ಬಿಜೆಪಿ ಸದಸ್ಯರು ಶನಿವಾರದಂದು ಪ್ರಮಾಣ ವಚನ ಸ್ವೀಕರಿಸಲು ನಿರಾಕರಿಸಿದ್ದಾರೆ. ಇದು ಹಿರಿಯ ಶಾಸಕರಿಗೆ ಮಾಡಿದ ಅವಮಾನ ಎಂದು ಬಿಜೆಪಿ ಶಾಸಕರು ಹೇಳಿದ್ದಾರೆ. ಏತನ್ಮಧ್ಯೆ, ಕಾಂಗ್ರೆಸ್ ಮತ್ತು ಬಿಆರ್‌ಎಸ್ ಮುಖಂಡರು ಬಿಜೆಪಿ ಶಾಸಕ ಬಹಿಷ್ಕಾರ ನಿರ್ಧಾರವನ್ನು “ಸಂವಿಧಾನಕ್ಕೆ ಅವಮಾನ” ಎಂದು ಕರೆದಿದ್ದಾರೆ.