Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಗೆ ​​ ಮತ್ತೆ 4 ದಿನ ಇಡಿ ಕಸ್ಟಡಿ ವಿಸ್ತರಣೆ

ನವದೆಹಲಿ: ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿತ್ತು.

ಅವರನ್ನು 6 ದಿನಗಳ ಕಾಲ ಇಡಿ ಕಸ್ಟಡಿಗೆ ವಹಿಸಲಾಗಿದೆ. ಇಂದು ರೋಸ್ ಅವೆನ್ಯೂ ಕೋರ್ಟ್​​ಗೆ ಅವರನ್ನು ವಿಚಾರಣೆಗೆ ಕರದುಕೊಂಡು ಬರಲಾಗಿತ್ತು. ಇದೀಗ ಮತ್ತೆ 4 ದಿನ ಇಡಿ ಕಸ್ಟಡಿ ವಿಸ್ತರಣೆಯನ್ನು ಮಾಡಲಾಗಿದೆ ಎಂದು ದೆಹಲಿ ಕೋರ್ಟ್​​​ ಆದೇಶ ನೀಡಿದೆ.

ಏಪ್ರಿಲ್​​​ 1ರವರೆಗೆ ಇಡಿ ಕಸ್ಟಡಿ ಅವಧಿ ವಿಸ್ತರಣೆ ಮಾಡಲಾಗಿದೆ. ಆರು ದಿನಗಳ ಇಡಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಇಂದು ಕೋರ್ಟ್​​ ಮುಂದೆ ಹಾಜರುಪಡಿಸಲಾಗಿದೆ. ಈ ವಿಚಾರಣೆಯನ್ನು ವಿಶೇಷ ಸಿಬಿಐ ನ್ಯಾಯಾಧೀಶ ಕಾವೇರಿ ಬವೇಜಾ ಅವರು ನಡೆಸಿ, 4 ದಿನ ಕಸ್ಟಡಿಯನ್ನು ವಿಸ್ತರಣೆ ಮಾಡಿದ್ದಾರೆ.

ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್​​ ಅವರನ್ನು ಮಾರ್ಚ್​​ 22ರಂದು ಇಡಿ ಬಂಧಿಸಲಾಗಿತ್ತು.