Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ದೇವೇಗೌಡರ ಕುಟುಂಬಕ್ಕೆ ಶಾಕ್- JDS ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ನೇಮಕ

ಬೆಂಗಳೂರು: ಜೆಡಿಎಸ್‍ನಿಂದ ಉಚ್ಛಾಟನೆಗೊಂಡ ಅಸಮಾಧಾನಿತರು ಬೆಂಗಳೂರಿನ ಕೆ.ಜೆ ಹಳ್ಳಿ ಬಳಿ ಖಾಸಗಿ ಹೊಟೇಲ್ ನಲ್ಲಿ ಸಭೆ ನಡೆಸಿ ದೇವೇಗೌಡರನ್ನು ಕೆಳಗಿಳಿಸಿ ಸಿ.ಕೆ.ನಾಣು ಅವರನ್ನು ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.

ಬಳಿಕ ಮಾತನಾಡಿದ ಸಿಎಂ ಇಬ್ರಾಹಿಂ, ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆ ನನ್ನ ನಿರ್ಣಯ ಅಲ್ಲ, ಇದು ರಾಷ್ಟ್ರೀಯ ಕೌನ್ಸಿಲ್ ನ ನಿರ್ಧಾರ. ಜಯಪ್ರಕಾಶ್ ನಾರಾಯಣರ ಸಿದ್ಧಾಂತದ ಮೇಲೆ ಜನತಾ ಪಕ್ಷ ಕಟ್ಟಲಾಯಿತು. ಎಲ್ಲಾ ರಾಜ್ಯಗಳ ಅಧ್ಯಕ್ಷರ ನೇಮಕವನ್ನ ನಾಣುರವರಿಗೆ ನೀಡಲಾಗಿದೆ ಎಂದರು.