Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಾಳೆ ಯಾವುದೇ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ : ಜಿಲ್ಲಾಧಿಕಾರಿ ದಯಾನಂದ್

ನಾಳೆ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಅಂತ ಜಿಲ್ಲಾಧಿಕಾರಿ ದಯಾನಂದ್ ತಿಳಿಸಿದ್ದಾರೆ. ಬಾಂಬ್ ಬೆದರಿಕೆ ಇ-ಮೇಲ್ ಕಾರಣ ನಗರದ ಶಾಲಾ-ಕಾಲೇಜುಗಳಲ್ಲಿ ಪೊಲೀಸರು ಪರಿಶೀಲನೆ ನಡೆಸಿ, ಸಾಕಷ್ಟು ಕ್ರಮ ಕೈಗೊಂಡಿದ್ದಾರೆ. ಬೆದರಿಕೆ ಸಂದೇಶದಲ್ಲಿ ಯಾವುದೇ ಗಂಭೀರತೆಯಿಲ್ಲ. ಹೀಗಾಗಿ, ನಾಳೆ ಬೆಂಗಳೂರಿನ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂಬುದಾಗಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ಬೆಂಗಳೂರಿನ 60 ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದಿತ್ತು. ಈ ಕಾರಣದಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು ಎಂದರು.