Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯು

ಮಧ್ಯಪ್ರದೇಶ: ಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯರನ್ನು ಬಬ್ಲಿ ಮಸಾರೆ (17) ಹಾಗೂ ರಾಧಿಕಾ ಭಾಸ್ಕರ್ (17) ಎಂದು ಗುರುತಿಸಲಾಗಿದೆ.

ಹೊಸದಾಗಿ ನಿರ್ಮಿಸಲಾಗಿದ್ದ ಹಳಿ ಮೇಲೆ ಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ 10 ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ.

ಟ್ಯೂಷನ್ ಮುಗಿಸಿಕೊಂಡು ವಾಪಸ್ ಮನೆಗೆ ಹೋಗುತ್ತಿದ್ದ ಈ ವಿದ್ಯಾರ್ಥಿನಿಯರು ಕೈಲೋದ್ ಹಾಲಾ ಎಂಬ ಪ್ರದೇಶದ ಬಳಿ ನಿರ್ಮಿಸಲಾಗಿದ್ದ ರೈಲು ಹಳಿಯನ್ನು ದಾಟುತ್ತಿದ್ದರು. ಈ ವೇಳೆ ಇದೇ ಹಳಿಯಲ್ಲಿ ಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲು ಡಿಕ್ಕಿಯಾಗಿ ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತರಾಗಿದ್ದಾರೆ.

ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ವಿದ್ಯಾರ್ಥಿಗಳ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಅವರ ಆದೇಶದ ಅನುಸಾರ ರೈಲ್ವೆ ರಕ್ಷಣಾ ಪಡೆಯ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ವಿಭಾಗೀಯ ರೈಲ್ವೆ ಮ್ಯಾನೇಜರ್ ರಜನೀಶ್ ಕುಮಾರ್ ತಿಳಿಸಿದ್ದಾರೆ.