Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪ್ರೀ ವೆಡ್ಡಿಂಗ್ ಶೂಟ್: ವೈದ್ಯ ಕರ್ತವ್ಯದಿಂದ ವಜಾ

ಚಿತ್ರದುರ್ಗ: ಭರಮಸಾಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಚಿತ್ರೀಕರಣ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಹೊರಗುತ್ತಿಗೆ ವೈದ್ಯ ಡಾ. ಅಭಿಷೇಕ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಆದೇಶಿಸಿದ್ದಾರೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯ ಡಾ. ಅಭಿಷೇಕ್ ಆರೋಗ್ಯ ಕೇಂದ್ರದಲ್ಲಿನ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಕಳೆದ ಫೆ 07 ರಂದು ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿದ್ದರು. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅಲ್ಲದೆ, ಈ ಕುರಿತ ಸುದ್ದಿ ಮಾಧ್ಯಮಗಳಲ್ಲಿಯೂ ವರದಿ ಬಿತ್ತರವಾಗಿತ್ತು.

ಇಂತಹ ಕಾರ್ಯವು ನಿಯಮ ಬಾಹಿರವಾಗಿದ್ದು, ವೈದ್ಯರು ಕರ್ತವ್ಯ ಲೋಪವೆಸಗಿರುತ್ತಾರೆ. ಹೀಗಾಗಿ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳ ವರದಿಯನ್ವಯ ಡಾ. ಅಭಿಷೇಕ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ತಿಳಿಸಿದ್ದಾರೆ.