Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬಡ ಕುಟುಂಬಗಳಿಗೆ ರೂ. 5000 : ಗ್ಯಾರಂಟಿ ಘೋಷಣೆ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಐದು ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರದ ಚುಕ್ಕಾಣೆಯನ್ನು ಹಿಡಿಯುವುದರಲ್ಲಿ ಯಶಸ್ವಿಯಾಗಿದೆ.

ಈಗ ಕಾಂಗ್ರೆಸ್‌ನವರು ಆಂಧ್ರ ಪ್ರದೇಶದಲ್ಲೂ ಅದೇ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಿದ್ದಾರೆ. ಆಂಧ್ರ ಪ್ರದೇಶದಲ್ಲಿ ಅರ್ಹ ಬಡ ಕುಟುಂಬಗಳಿಗೆ ಪ್ರತಿ ತಿಂಗಳಿಗೆ 5 ಸಾವಿರ ರೂ. ನೀಡುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಅನಂತಪುರದಲ್ಲಿ
ಘೋಷಿಸಿದ್ದಾರೆ.