Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಬಿಜೆಪಿ ಮೌಢ್ಯ ಬಿತ್ತುತ್ತಿದೆ’: ಸಚಿವ ಗುಂಡೂರಾವ್

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಳೆ ಬರುವುದಿಲ್ಲ ಎಂಬ ಮೌಢ್ಯವನ್ನು ಬಿಜೆಪಿ ಬಿತ್ತುತ್ತಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.

ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿರುವ ಸಚಿವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಳೆ ಬರುವುದಿಲ್ಲ ಎಂಬ ಮೌಢ್ಯವನ್ನು ಬಿಜೆಪಿ ಆರೋಪಕ್ಕೆ ಬಿತ್ತುತ್ತಿದೆ. ನೆರೆಯ ಕೇರಳ ಹಾಗೂ ತಮಿಳುನಾಡಿನಲ್ಲೂ ಮಳೆಯಿಲ್ಲ. ಈ ಬಾರಿ ಕೇರಳದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ 14 ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲಾಗಿದೆ. ಅಲ್ಲಿ ಕಾಂಗ್ರೆಸ್ ಸರ್ಕಾರವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಪರಿಸರ ನಾಶ, ಜಾಗತಿಕ ತಾಪಮಾನ, ಎಲ್‌ನಿನೋ ಎಫೆಕ್ಟ್‌ನಿಂದಾಗಿ ಬದಲಾಗುತ್ತಿರುವ ಋತುಮಾನದ ಬದಲಾವಣೆ ಮಳೆ ಕೊರತೆಗೆ ಕಾರಣ. ಇದು ಪ್ರಾಥಮಿಕ ಶಿಕ್ಷಣ ಪಡೆಯುತ್ತಿರುವ ಶಾಲಾ ಮಕ್ಕಳಿಗೂ ಗೊತ್ತಿದೆ. ಆದರೆ ಬಿಜೆಪಿಯವರು ಮಳೆ ಕೊರತೆಗೆ ಕಾಂಗ್ರೆಸ್ ಕಾರಣ ಎಂದು ಅಜ್ಞಾನ ಪ್ರದರ್ಶಿಸುತ್ತಿದ್ದಾರೆ. ಇಂತಹ ಮೂಢರು ಬಿಜೆಪಿಯಲ್ಲಿಯಲ್ಲಿ ಮಾತ್ರ ಇರಲು ಸಾಧ್ಯ ಎಂದು ಅವರು ಟ್ವೀಟ್‌ ಮಾಡಿದ್ದಾರೆ.