Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬೆಂಗಳೂರಿಗೆ ಇನ್ನು ಒಂದು ತಿಂಗಳು ಮಾತ್ರ ನೀರು ಪೂರೈಕೆ.!

 

ಬೆಂಗಳೂರು: ರಾಜ್ಯದಲ್ಲಿ ಬರದ  ಛಾಯೆ ಹೆಚ್ಚಾಗುತ್ತಿದ್ದು ಅನೇಕ ಜಿಲ್ಲೆಗಳಲ್ಲಿ ನೀರಿನ ಅಭಾವ ಕಾಣಲಾರಂಬಿಸಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಲವೆಡೆ ಈಗಾಗಲೇ ಕುಡಿಯುವ ನೀರಿಗೂ ಅಭಾವ ಉಂಟಾಗಿದೆ.

ಈ ಮಧ್ಯೆ ರಾಜಧಾನಿ ಬೆಂಗಳೂರಿನಲ್ಲಿಯೂ ನೀರಿನ ಸಮಸ್ಯೆ ಹೆಚ್ಚಾಗಲಾರಂಭಿಸಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕಾವೇರಿ ನೀರಾವರಿ ತಾಂತ್ರಿಕ ಸಮಿತಿ ಆಘಾತಕಾರಿ ಸುದ್ದಿಯನ್ನು ಹೊರಹಾಕಿದೆ. ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳ ಈಗಿನ ನೀರಿನ ಮಟ್ಟದ ಪ್ರಕಾರ ಬೆಂಗಳೂರಿಗೆ ಇನ್ನು ಒಂದು ತಿಂಗಳು ಮಾತ್ರ ನೀರು ಪೂರೈಕೆ ಮಾಡಬಹುದು ಎಂದು ಸಮಿತಿ ಹೇಳಿದೆ.