Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬೆಂಗಳೂರಿನ ಯಾವುದಾದರೂ ವೃತ್ತಕ್ಕೆ ಲೀಲಾವತಿ ಹೆಸರು ಇಡಲು ಒತ್ತಾಯ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಇಹಲೋಕ ತ್ಯಜಿಸಿದ್ದಾರೆ. ಈ ಹಿನ್ನಲೆಯಲ್ಲಿ ನಟಿ ಲೀಲಾವತಿ ಅವರ ಹೆಸರು ಅಜರಾಮರವಾಗಿ ಉಳಿಯಬೇಕೆಂಬ ನಿಟ್ಟಿನಲ್ಲಿ ನಗರದ ಯಾವುದಾದರೊಂದು ಪ್ರಮುಖ ವೃತ್ತಕ್ಕೆ ಅವರ ಹೆಸರು ನಾಮಕರಣ ಮಾಡಬೇಕು ಎಂದು ಬಿಬಿಎಂಪಿ ನೌಕರರ ಸಂಘ ಆಗ್ರಹಿಸಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಬಿಬಿಎಂಪಿ ನೌಕರರ ಸಂಘ ಅಧ್ಯಕ್ಷ ಅಮೃತ್ರಾಜ್ ಅವರು, ನಗರದ ನಾಯಂಡಹಳ್ಳಿ ಸರ್ಕಲ್ ಗೆ ಲೀಲಾವತಿ ವೃತ್ತ ಎಂದು ನಾಮಕರಣ ಮಾಡಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಈಗಾಗಲೇ ಹಲವು ಗಣ್ಯರ ಹೆಸರುಗಳನ್ನು ಬೆಂಗಳೂರಿನ ರಸ್ತೆಗೆ, ವೃತ್ತಕ್ಕೆ ಇಡಲಾಗಿದ್ದು, ಹೀಗಾಗಿ ಇದೇ ರೀತಿಯಲ್ಲಿ ಲೀಲಾವತಿ ಅವರ ಹೆಸರೂ ಕೂಡ ಇಡುವುದು ಸೂಕ್ತ ಎಂದರು.

ಇನ್ನು ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿದ್ದಾರೆ. ಈ ಮನವಿಯನ್ನು ಸರ್ಕಾರದ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು ಭರವಸೆ ನೀಡಿದ್ದಾರೆ ಎಂದರು.