Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬೆಂಗಳೂರು ನಗರಕ್ಕೆ ಪ್ರತಿದಿನ ಎಷ್ಟು ದಶ ಲಕ್ಷ ಲೀಟರ್ ನೀರು ಬೇಕು.? ಎಷ್ಟು ಕೊರತೆ ಇದೆ.?

 

 

ಬೆಂಗಳೂರು: ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಂಗಳೂರು ನಗರಕ್ಕೆ ಪ್ರತಿದಿನ 2,600 ದಶಲಕ್ಷ ಲೀಟರ್ (ಎಂಎಲ್ ಡಿ) ನೀರು ಅಗತ್ಯವಿದ್ದು, ಸುಮಾರು 500 ಎಂಎಲ್ ಡಿ ಕೊರತೆ ಇದೆ ಎಂದು ಹೇಳಿದ್ದಾರೆ.

ಸರ್ಕಾರ ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಗರಕ್ಕೆ ಕುಡಿಯುವ ಮತ್ತು ಕೈಗಾರಿಕಾ ಉದ್ದೇಶಗಳಿಗಾಗಿ 2,600 ಎಂಎಲ್ಡಿ ನೀರು ಬೇಕು.

ಇದರಲ್ಲಿ 1,450 ಎಂಎಲ್ ಡಿ ನೀರನ್ನು ಕಾವೇರಿ ನದಿಯಿಂದ ಮತ್ತು 650 ಎಂಎಲ್ ಡಿಯನ್ನು ನಗರದ ಬೋರ್ ವೆಲ್ ಗಳಿಂದ ಒದಗಿಸಲಾಗುತ್ತಿದೆ. 500 ಎಂಎಲ್ ಡಿ ನೀರಿನ ಕೊರತೆ ಇದೆ.

ಭವಿಷ್ಯದಲ್ಲಿ ಬಿಕ್ಕಟ್ಟನ್ನು ಕೊನೆಗೊಳಿಸಲು ಸರ್ಕಾರ ತಜ್ಞರ ಸಮಿತಿಯನ್ನು ರಚಿಸುತ್ತದೆ ಎಂದು ಅವರು ಹೇಳಿದರು. ನೀರು ವ್ಯರ್ಥವಾಗುವುದನ್ನು ತಡೆಯಲು ಅಧಿಕಾರಿಗಳು 143 ಕಾರ್ಯಪಡೆ ತಂಡಗಳನ್ನು ನಿಯೋಜಿಸಿದ್ದಾರೆ ಮತ್ತು ಹೆಚ್ಚಿನದನ್ನು ಸೇರಿಸಲಿದ್ದಾರೆ. ನಾಗರಿಕರು ನೀರು ವ್ಯರ್ಥವಾಗುತ್ತಿರುವ ಬಗ್ಗೆ ಸಹಾಯವಾಣಿ 1916 ಅಥವಾ ವಾಟ್ಸಾಪ್ನಲ್ಲಿ ದೂರುಗಳನ್ನು ಸಲ್ಲಿಸಬಹುದು. ಸ್ವೀಕರಿಸಿದ ದೂರುಗಳನ್ನು ತಕ್ಷಣ ಪರಿಹರಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ನಗರದ 14,000 ಕೊಳವೆಬಾವಿಗಳ ಪೈಕಿ 6,900 ಕೊಳವೆಬಾವಿಗಳು ಬತ್ತಿಹೋಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಗೆ ಸೇರ್ಪಡೆಯಾದ 110 ಹಳ್ಳಿಗಳ ಪೈಕಿ 55 ಗ್ರಾಮಗಳು ನೀರಿನ ಸಮಸ್ಯೆ ಎದುರಿಸುತ್ತಿವೆ ಎಂದರು.