Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಭಾರತ್ ಜೋಡೊ ನ್ಯಾಯ ಯಾತ್ರೆ: ರಾಹುಲ್‌ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ

ಕೋಲ್ಕತ್ತಾ:ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೊ ನ್ಯಾಯ ಯಾತ್ರೆಯ ಮೂಲಕ ಬಿರುಸಿನ ಪ್ರಚಾರ ನಡೆಯುತ್ತಿದೆ. ಇದರ ಮಧ್ಯೆ ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ದಾಳಿ ನಡೆದಿದೆ. ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ.

ಭಾರತ್ ಜೋಡೋ ನ್ಯಾಯ್ ಯಾತ್ರೆ’ ಅಂಗವಾಗಿ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬುಧವಾರ ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪಕ್ಷದ ರಾಜ್ಯ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಘಟನೆಯಲ್ಲಿ ವಾಹನದ ಹಿಂಬದಿಯ ಕಿಟಕಿ ಗಾಜು ಜಖಂಗೊಂಡಿದೆ . ಆದರೆ ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ. ಇದೀಗ ಈ ಘಟನೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ರಾಹುಲ್ ಗಾಂಧಿಯವರು ತಮ್ಮ ವಾಹನದಿಂದ ಹೊರಬಂದ ನಂತರ ಹಾನಿಗೊಳಗಾದ ಭಾಗವನ್ನು ಪರಿಶೀಲಿಸಿದ್ದಾರೆ.