Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಂಗಳೂರು: ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ಹಲವು ವಿಮಾನ ನಿಲ್ದಾಣಗಳಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಸಂದೇಶ ಬಂದಿದೆ ಎಂದು ಪೊಲೀಸ್ ಕಮಿಷನರ್  ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಡಿ 26 ರ ಮಧ್ಯರಾತ್ರಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ  ಹಲವು  ವಿಮಾನ ನಿಲ್ದಾಣಗಳಿಗೆ ಬಾಂಬ್ ಹಾಕುವುದಾಗಿ [email protected] ಇ ಮೇಲ್ ನಿಂದ ಸಂದೇಶ ಬಂದಿದೆ ಎಂದು ತಿಳಿಸಿದ್ದಾರೆ.

ನಾವು ಭಯೋತ್ಪಾದಕರು ಇಂದು ಈ ಮೇಲ್ ನಲ್ಲಿ ಬರೆದಿದ್ದು ಈ ಸಂದೇಶವನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಗಮನಿಸಿದ್ದು ಅಧಿಕಾರಿಗಳ ದೂರಿನ ಮೇಲೆ  ಎಫ್ ಐ ಆರ್ ದಾಖಲಿಸಲಾಗಿದೆ.