Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ- ಬಹುತೇಕ ಅಂತಿಮ

ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹೆಚ್‌ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡುವುದು ಬಹುತೇಕ ಅಂತಿಮವಾಗಿದ್ದು ಅಧಿಕೃತ ಘೋಷಣೆ ಒಂದೇ ಬಾಕಿ ಇದೆ.

ಮಾಧ್ಯಮದೊಂದಿಗೆ ಮಾತನಾಡಿದ ಹೆಚ್‌ಡಿಕೆ, ಇಂದು ಸಂಜೆ ಮಂಡ್ಯ ಭಾಗದ ಜೆಡಿಎಸ್‌ ನಾಯಕರ ಸಭೆಯನ್ನು ಕರೆಯುತ್ತೇನೆ. ಈ ಸಭೆಯ ಬಳಿಕ ಅಂತಿಮವಾಗಿ ಅಭ್ಯರ್ಥಿಯ ಹೆಸರನ್ನು ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಜೆಡಿಎಸ್‌ನ ಹೃದಯ ಭಾಗ ಮಂಡ್ಯ. ಕಳೆದ ಚುನಾವಣೆ ನಮಗೆ ನೈತಿಕ ಸೋಲು ಅಲ್ಲ. ಈ ಚುನಾವಣೆ ಮೂಲಕ ಜೆಡಿಎಸ್ ಮುಗಿಸುತ್ತೇವೆ ಎನ್ನುವ ದುರಹಂಕಾರದ ಮಾತಿಗೆ ಚುನಾವಣೆಯಲ್ಲಿ ಉತ್ತರ ಕೊಡುತ್ತೇವೆ ಎಂದರು.

ಬದುಕಿರುವರೆಗೂ ನಾವು ರಾಮನಗರ ಜಿಲ್ಲೆಯ ಅಭಿವೃದ್ಧಿ ಕೈ ಬಿಡುವುದಿಲ್ಲ. ರಾಮನಗರ, ಚನ್ನಪಟ್ಟಣ ಜನತೆಗೆ ಮನವಿ ಮಾಡುತ್ತೇನೆ. ಈ ಪಕ್ಷ ಉಳಿಸಲು 3 ಬಾರಿ ಹೃದಯ ಚಿಕಿತ್ಸೆ, ಎರಡು ಬಾರಿ ಮೆದುಳು ಚಿಕಿತ್ಸೆ ನಡೆದಿದೆ. ಇಷ್ಟು ಆದರೂ ಬದುಕಿದರೆ ನಾಡಿಗೆ ಏನೋ ಸೇವೆ ಬೇಕು ಅಂತ ದೇವರು ಬದುಕಿಸಿದ್ದಾನೆ. ಈ ಪಕ್ಷ ಉಳಿಸೋದು ನಿಮ್ಮ ಕೈಯಲ್ಲಿ ಇದೆ. ಇದು ರೈತರ ಪಕ್ಷ ಎಂದು ಹೇಳಿದರು.

ಬಿಜೆಪಿಯವರು ಮೂರು ಕ್ಷೇತ್ರಗಳನ್ನು ನಮಗೆ ಬಿಟ್ಟು ಕೊಟ್ಟಿದ್ದಾರೆ. ಹಾಸನ ಅಭ್ಯರ್ಥಿಯ ಬಗ್ಗೆ ನಮ್ಮ ವರಿಷ್ಠರಾದ ದೇವೇಗೌಡರು ತೀರ್ಮಾನ ತೆಗೆದುಕೊಂಡಿದ್ದಾರೆ. ಕೋಲಾರದಲ್ಲಿ ಮೂವರ ಹೆಸರು ಇದೆ. ಇದರ ಜೊತೆ ಬಿಜೆಪಿಯ ಹಾಲಿ ಸಂಸದ ಮುನಿಸ್ವಾಮಿ ಅವರು ಕೆಲವರ ಬಗ್ಗೆ ಹೇಳಿದ್ದಾರೆ. ಹೀಗಾಗಿ ಪಕ್ಷದ ಸಭೆ ನಡೆಸಿ ಹೆಸರನ್ನು ಅಂತಿಮಗೊಳಿಸುತ್ತೇವೆ ಎಂದು ತಿಳಿಸಿದರು.