Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಣಿಪುರ: ಅಪರಿಚಿತರ ಗುಂಡಿನ ದಾಳಿಗೆ ಯೋಧ ಸೇರಿ ಇಬ್ಬರು ಸಾವು

ಮಣಿಪುರ: ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ಐಆರ್​ಬಿ ಯೋಧ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ಮಣಿಪುರದ ಕಾಂಗ್​ಪೋಕ್ಪಿಯಲ್ಲಿ ನಡೆದಿದೆ.

ದಾಳಿಯಲ್ಲಿ ಲೀಮಾಖೋಂಗ್ ಮಿಷನ್ ವೆಂಗ್ ಗ್ರಾಮದ ಐಆರ್‌ಬಿ ಜವಾನ್ ಹೆನ್ಮಿನ್ಲೆನ್ ವೈಫೇಯ್ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಯ ಹುಂಖೋ ಕುಕಿ ಗ್ರಾಮದ ತಂಗ್ಮಿನ್ಲುನ್ ಹ್ಯಾಂಗ್ಸಿಂಗ್ ಎಂದು ಗುರುತಿಸಲಾಗಿದೆ.

ಹರಾಥೆಲ್ ಮತ್ತು ಕೊಬ್ಶಾ ಗ್ರಾಮಗಳ ನಡುವೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಇದರಲ್ಲಿ ಐಆರ್​ಬಿ ಸಿಬ್ಬಂದಿ ಇದ್ದ ವಾಹನದ ಮೇಲೆ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯಲ್ಲಿ ಹೆನ್ಮಿನ್ಲೆನ್ ವೈಫೇಯ್ ಮತ್ತು ತಂಗ್ಮಿನ್ಲುನ್ ಹ್ಯಾಂಗ್ಸಿಂಗ್ ಇಬ್ಬರೂ ಗಾಯಗೊಂಡಿದ್ದಾರೆ.

ಇನ್ನು ದಾಳಿ ನಡೆದ ಪ್ರದೇಶಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗಿದ್ದು, ದಾಳಿಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳನ್ನು ಬಂಧಿಸಲು ಸಮಗ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಏಪ್ರಿಲ್ 19 ರಂದು ಮಣಿಪುರ ಹೈಕೋರ್ಟ್​ ರಾಜ್ಯದ ಮೈತಿ ಸಮುದಾಯವನ್ನು ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿಸುವುದಾಗಿ ನಿರ್ದೇಶನ ನೀಡಿತ್ತು. ಕೋರ್ಟ್ ಈ ನಿರ್ದೇಶನ ನೀಡಿದ ಬಳಿಕ ಪ್ರತಿಭಟನೆ ಪ್ರಾರಂಭವಾಗಿತ್ತು.