Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮತ್ತೆ ಅಧಿಕಾರಕ್ಕೆ ಮರಳಲು ಬಿಜೆಪಿ ಭಾರೀ ಕಸರತ್ತು : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಪ್ರಣಾಳಿಕೆಯ ಹೈಲೈಟ್ಸ್​

ಲೋಕಸಭಾ ಚುನಾವಣೆಗೆ ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ.

ಇನ್ನು ಪ್ರಧಾನಿ ನರೇಂದ್ರ ಮೋದಿಯಿಂದ ಮೊದಲ ಸಂಕಲ್ಪ ಪತ್ರವನ್ನು ದೆಹಲಿ ನಿವಾಸಿಗಳಿಗೆ ವಿತರಣೆ ಮಾಡಿದರು. ದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ನೀಡಿರುವ ನಿರ್ಣಯ ಪತ್ರದಲ್ಲಿ ರೈತರಿಂದ ಹಿಡಿದು ಯುವಕರವರೆಗೂ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

ಬಿಜೆಪಿಯ ಪ್ರಣಾಳಿಕೆಯು GYAN ಅಂದರೆ ಬಡವರು, ಯುವಕರು, ರೈತರು ಮತ್ತು ಮಹಿಳಾ ಶಕ್ತಿಯ ಮೇಲೆ ಕೇಂದ್ರೀಕರಿಸಿದೆ. ಮೋದಿ ಕೀ ಗ್ಯಾರಂಟಿ; ಅಭಿವೃದ್ಧಿ ಹೊಂದಿದ ಭಾರತ 2047’ ಬಿಜೆಪಿ ಪ್ರಣಾಳಿಕೆಯಲ್ಲಿರುವ ಧ್ಯೇಯವಾಗಿದೆ. ಅದರಲ್ಲಿ ದೇಶದ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಇದೆ.

ಪ್ರಣಾಳಿಕೆಯ ಹೈಲೈಟ್ಸ್​ಉದ್ಯೋಗ ಖಾತರಿ 2036 ರಲ್ಲಿ ಒಲಿಂಪಿಕ್ಸ್ ಆತಿಥ್ಯ 3 ಕೋಟಿ ಲಕ್​ಪತಿ ದೀದಿ ಮಾಡುವ ಗುರಿ ಮಹಿಳಾ ಮೀಸಲಾತಿ ಜಾರಿಗೊಳಿಸುವ ಭರವಸೆ ಕೃಷಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಮೀನುಗಾರರಿಗೆ ಯೋಜನೆ ಇ-ಶ್ರಮ್ ಮೂಲಕ ಕಲ್ಯಾಣ ಯೋಜನೆಯ ಪ್ರಯೋಜನ 2025 ಬುಡಕಟ್ಟು ಹೆಮ್ಮೆಯ ವರ್ಷ ಪ್ರತಿ ಕ್ಷೇತ್ರದಲ್ಲೂ ಒಬಿಸಿ-ಎಸ್‌ಸಿ-ಎಸ್‌ಟಿಗೆ ಗೌರವ ಜಾಗತಿಕ ಉತ್ಪಾದನಾ ಕೇಂದ್ರ ರಚಿಸಲು ಸಿದ್ಧತೆ ಪ್ರಪಂಚದಾದ್ಯಂತ ರಾಮಾಯಣ ಹಬ್ಬ ಅಯೋಧ್ಯೆಯ ಅಭಿವೃದ್ಧಿ ಒಂದು ರಾಷ್ಟ್ರ, ಒಂದು ಚುನಾವಣೆ ಈಶಾನ್ಯ ಭಾರತದ ಅಭಿವೃದ್ಧಿ AI, ಸೆಮಿಕಂಡಕ್ಟರ್ ಮತ್ತು ಬಾಹ್ಯಾಕಾಶ ವಲಯದಲ್ಲಿ ಅಭಿವೃದ್ಧಿ