Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಭರ್ಜರಿ ಜಯದತ್ತ ಬಿಜೆಪಿ ದಾಪುಗಾಲು – ತೆಲಂಗಾಣದಲ್ಲಿ ಕೈ ಮುನ್ನಡೆ

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತಎಣಿಕೆ ಇಂದು ಬೆಳಗ್ಗೆ ಆರಂಭಗೊಂಡಿದ್ದು, ಈವರೆಗಿನ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ ಗಢದಲ್ಲಿ ಬಿಜೆಪಿಗೆ ಗೆಲುವಿನತ್ತ ದಾಪುಗಾಲು ಇಡುತ್ತಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್‌ ಭಾರೀ ಮುನ್ನಡೆಯಲ್ಲಿದೆ.

ತೆಲಂಗಾಣದಲ್ಲಿ ಕಾಂಗ್ರೆಸ್‌ ಭಾರೀ ಮುನ್ನಡೆಯಲ್ಲಿದ್ದು, ಆಡಳಿತಾರೂಢ ಬಿಆರ್‌ಎಸ್‌ಗೆ ಮುಖಭಂಗವಾಗಿದೆ.

ನಾಳೆ ಮಿಜೋರಾಂ ವಿಧಾನಸಭಾ ಚುನಾವಣೆಯ ಮತಎಣಿಕೆ ನಡೆಯಲಿದ್ದು, ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಗೆ ರಾಜಸ್ಥಾನ ಮತ್ತು ಛತ್ತೀಸ್‌ ಗಢದಲ್ಲಿ ಭಾರೀ ಮುಖಭಂಗ ಅನುಭವಿಸಿದೆ.

ಮಧ್ಯಪ್ರದೇಶದಲ್ಲಿಯೂ ಕಾಂಗ್ರೆಸ್‌ ಗೆ ಹಿನ್ನಡೆಯಾಗಿದ್ದು, ಸದ್ಯ ಬಿಜೆಪಿ ಮೂರು ರಾಜ್ಯದಲ್ಲಿ ಮುನ್ನಡೆ ಸಾಧಿಸಿದೆ.